ಮಂಗಳೂರು: ಕರ್ನಾಟಕ ಸರ್ಕಾರದ ಇಂಧನ ಸಚಿವರಾದ ಕೆ ಜೆ ಜಾರ್ಜ್ ರವರು ಬೋಂದೆಲ್ ಸಂತ ಲಾರೆನ್ಸ್ ಪುಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು. ವಂದನೀಯ ಧರ್ಮ ಗುರು ಪೀಟರ್ ಗೊನ್ಸಲ್ವಿಸ್ ಸ್ವಾಗತಿಸಿ ಅವರಿಗೆ ವಿಶೇಷ ಪ್ರಾಥನೆಸಲ್ಲಿಸಲಾಯಿತು.
ವಂದನೀಯ ಧರ್ಮ ಗುರು ಲಾರೆನ್ಸ್ ಕುತಿನ್ಹ ಪಾಲನ ಮಂಡಳಿ ಉಪದೇಕ್ಷ ಜಾನ್ ಡಿಸಿಲ್ವ ಮತ್ತು ಸದಸ್ಯರಾದ ರೂಡಿ ಪಿಂಟೋ ರವರು ಅವರಿಗೆ ಶಾಲೂ, ಹೂ ಗುಚ್ಚ ಮತ್ತು ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಶ್ರೀ ಐ ವನ್ ಡಿಸೋಜಾ, ಮಾಜಿ ಶಾಸಕರಾದ ಶ್ರೀ ಜೆ ಆರ್ ಲೋಬೊ, ಮಂಗಳೂರು ವಿದ್ಯುತ್ ನಿಗಮ ಮಂಡಳಿ ಅಧ್ಯಕ್ಷ ಹರೀಶ್ ಕುಮಾರ್ ರಚನಾ ಅಧ್ಯಕ್ಷ ಶ್ರೀ ಜಾನ್ ಮೊಂತೆರೋ ಮತ್ತು ಇನ್ನಿತರು ಉಪಸ್ಥಿತರಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.