


ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ರಾಜ್ಯದ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದೆ. ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 15,000 ಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕ ಹಾಗೂ ಅರ್ಹತಾ ವಿವರಗಳನ್ನು ಪ್ರಕಟಿಸಲಾಗಿದೆ.
15 ಸಾವಿರ ಹುದ್ದೆಗಳ ವಿವರ
ಕಲ್ಯಾಣ ಕರ್ನಾಟಕ ಭಾಗದಲ್ಲಿ 6,967 ಹುದ್ದೆಗಳು ಭರ್ತಿಯಾಗಲಿವೆ. ಇದರಲ್ಲಿ ಪದವೀಧರ ಪ್ರಾಥಮಿಕ ಶಿಕ್ಷಕರ (GPT) 3,228, ಪ್ರೌಢಶಾಲಾ ಸಹ ಶಿಕ್ಷಕರ 2,214, ಪ್ರಾಥಮಿಕ ಶಾಲಾ ಶಿಕ್ಷಕರ 800, ದೈಹಿಕ ಶಿಕ್ಷಣ ಶಿಕ್ಷಕರ 425 ಹಾಗೂ ಗಣಕಯಂತ್ರ ವಿಜ್ಞಾನ ಶಿಕ್ಷಕರ 300 ಹುದ್ದೆಗಳು ಸೇರಿವೆ.
ಕಲ್ಯಾಣೇತರ/ಉಳಿದ ಮೂಲ ವೃಂದದಲ್ಲಿ 8,033 ಹುದ್ದೆಗಳು ಖಾಲಿ ಇವೆ. ಈ ಪೈಕಿ GPT 5,272, ಪ್ರೌಢಶಾಲಾ ಸಹ ಶಿಕ್ಷಕರ 2,286, ಪ್ರಾಥಮಿಕ ಶಾಲಾ ಶಿಕ್ಷಕರ 100, ದೈಹಿಕ ಶಿಕ್ಷಣ ಶಿಕ್ಷಕರ 175 ಹಾಗೂ ಗಣಕಯಂತ್ರ ವಿಜ್ಞಾನ ಶಿಕ್ಷಕರ 200 ಹುದ್ದೆಗಳಿವೆ.
ಪ್ರಮುಖ ದಿನಾಂಕಗಳು
ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಅರ್ಹತೆ ಹಾಗೂ ವಿಷಯಕ್ಕೆ ಅನುಗುಣವಾಗಿ ಹುದ್ದೆ ಆಯ್ಕೆ ಮಾಡಿಕೊಂಡು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ವಯಸ್ಸು ಕಡ್ಡಾಯವಾಗಿದ್ದು, ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.
ಸಾಮಾನ್ಯ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ₹750 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ವಿಶೇಷ ಚೇತನ ಅಭ್ಯರ್ಥಿಗಳಿಗೆ ₹500 ಶುಲ್ಕ ನಿಗದಿಯಾಗಿದೆ.
ಅಭ್ಯರ್ಥಿಗಳು ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಮಾತ್ರ ಅರ್ಜಿ ಸಲ್ಲಿಸಬೇಕು. ಅಂಚೆ ಅಥವಾ ಖುದ್ದಾಗಿ ಸಲ್ಲಿಸುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಅರ್ಜಿ ಸಲ್ಲಿಸುವ ವೇಳೆ ರಚಿಸುವ User Name ಮತ್ತು Password ಅನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು. ಮುಂದಿನ ಹಂತದಲ್ಲಿ ಪ್ರವೇಶ ಪತ್ರ (Hall Ticket) ಡೌನ್ಲೋಡ್ ಮಾಡಲು ಇವು ಅಗತ್ಯವಾಗಿರುತ್ತವೆ.
ಅರ್ಜಿ ಶುಲ್ಕವನ್ನು Internet Banking, Credit Card, Debit Card ಅಥವಾ ನೆಟ್ವರ್ಕಿಂಗ್ ಚಲನ್ ಮೂಲಕ ಆನ್ಲೈನ್ನಲ್ಲಿ ಪಾವತಿಸಬಹುದು.
ಒಬ್ಬ ಅಭ್ಯರ್ಥಿಯು ಒಂದು ವೃಂದದ ಒಂದು ಹುದ್ದೆಗೆ ಒಂದು ಜಿಲ್ಲೆಯಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದು. ಆದರೆ ಅರ್ಹತೆ ಹೊಂದಿದ್ದಲ್ಲಿ PST, GPSTR, HSTR ಸೇರಿದಂತೆ ವಿವಿಧ ವೃಂದಗಳ ಹುದ್ದೆಗಳಿಗೆ ಪ್ರತ್ಯೇಕ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಲು ಅವಕಾಶವಿದೆ.
ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೆ ಮುಂಚಿತವಾಗಿಯೇ ಅರ್ಜಿ ಸಲ್ಲಿಸುವುದು ಉತ್ತಮ. ಜಿಲ್ಲಾವಾರು ಅಧಿಸೂಚನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಸರ್ಕಾರದ ಅಧಿಕೃತ ಇ-ರಾಜಪತ್ರ ಪೋರ್ಟಲ್ ಪರಿಶೀಲಿಸಬಹುದು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.