ಹೈದರಾಬಾದ್: ಹೈದರಾಬಾದ್ನ ಲಸಿಕೆ ತಯಾರಿಕಾ ಕಂಪನಿ ‘ಇಂಡಿಯನ್ ಇಮ್ಯುನೊಲಾಜಿಕಲ್ಸ್ ಲಿಮಿಟೆಡ್’ (ಐಐಎಲ್) ಸೋಂಕಿತ ಜಾನುವಾರುಗಳ ಮೂಗು ಮತ್ತು ಗಂಟಲಿನ ಉರಿಯೂತ (ಐಬಿಆರ್) ಕಾಯಿಲೆಗೆ ಭಾರತದ ಮೊದಲ ಲಸಿಕೆ ‘ಜೀನ್ ಡಿಲೀಟೆಡ್ ದಿವಾ’ ಅಭಿವೃದ್ಧಿಪಡಿಸಿ ಸೋಮವಾರ ಬಿಡುಗಡೆ ಮಾಡಿದೆ.
ಈ ಲಸಿಕೆಯು ಸೋಂಕಿತ ಜಾನುವಾರುಗಳಿಂದ ಇತರ ಜಾನುವಾರುಗಳನ್ನು ರಕ್ಷಿಸುತ್ತದೆ. ಭಾರತದಲ್ಲಿ ಐಬಿಆರ್ ಸಾಂಕ್ರಾಮಿಕ ರೋಗವಾಗಿದ್ದು, ಗಾಳಿಯ ಮೂಲಕ ಹರಡುತ್ತದೆ ಮತ್ತು ಜಾನುವಾರುಗಳ ಸಂತಾನೋತ್ಪತ್ತಿ ಮೇಲೆ ಪರಿಣಾಮ ಬೀರುತ್ತದೆ. ಜಾನುವಾರುಗಳಲ್ಲಿ ಬಂಜೆತನ, ಕಡಿಮೆ ಹಾಲು ಉತ್ಪಾದನೆ, ಗರ್ಭಪಾತಕ್ಕೂ ಕಾರಣವಾಗುತ್ತದೆ.
ಭಾರತದಲ್ಲಿ ಈವರೆಗೆ ಈ ಸೋಂಕಿಗೆ ಯಾವುದೇ ಲಸಿಕೆಯಾಗಲೀ, ಚಿಕಿತ್ಸೆಯಾಗಲೀ ಲಭ್ಯವಿರಲಿಲ್ಲ. ಸದ್ಯ ಈ ಲಸಿಕೆಯ ಅಭಿವೃದ್ಧಿಯಿಂದಾಗಿ ಲಕ್ಷಾಂತರ ರೈತರಿಗೆ ಅನುಕೂಲವಾಗಲಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.