logo
AADYA ELECTRONICS.jpg
SHARADA TECHERS.jpeg
hindalco everlast.jpeg

ರಾಜ್ಯದ 16 ಜಿಲ್ಲೆಗಳಲ್ಲಿ ಗುಣ್ಣಮಟ್ಟದ ಕೀಮೋಥೆರಪಿ ಕೇಂದ್ರಗಳು: ಸಚಿವ ದಿನೇಶ್ ಗುಂಡೂರಾವ್‌

ಟ್ರೆಂಡಿಂಗ್
share whatsappshare facebookshare telegram
23 May 2025
post image

ಬೆಂಗಳೂರು: ಕ್ಯಾನ್ಸ‌ರ್ ರೋಗಿಗಳ ಅನುಕೂಲಕ್ಕಾಗಿ ರಾಜ್ಯದ 16 ಜಿಲ್ಲೆಗಳಲ್ಲಿ ಸುಲಭವಾಗಿ, ಗುಣ್ಣಮಟ್ಟದ ಕೀಮೋಥೆರಪಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್‌ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಮೇ. 22ರಂದು ಗುರುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಚಿವರು, "ಕ್ಯಾನ್ಸರ್ ರೋಗ ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬರುತ್ತಿದೆ. ಹೀಗಾಗಿ, ರಾಜ್ಯದ 16 ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಕೇಂದ್ರ ಆರಂಭಿಸಲಾಗುವುದು. ಪ್ರತಿ ವರ್ಷ 70 ಸಾವಿರ ಕ್ಯಾನ್ಸರ್ ಖಾಯಿಲೆಗಳು ಕಾಣಿಸಿಕೊಳ್ಳುತ್ತಿವೆ. ರೋಗಿಗಳು ಬೆಂಗಳೂರಿಗೆ ಬರಬೇಕು. ಬಡವರು ಕಿದ್ವಾಯಿಯಂತಹ ಸಂಸ್ಥೆಗಳಿಗೆ ಬರಬೇಕು. ಕೀಮೋ ಥೆರಪಿಗಾಗಿ 60% ರೋಗಿಗಳು 100 ಕಿ.ಮೀ. ಪ್ರಯಾಣ ಮಾಡಬೇಕು. ಸಮಯ ಮತ್ತು ತೊಂದರೆ, ಖರ್ಚು ಹೆಚ್ಚಾಗುತ್ತಿದೆ. ಹಾಗಾಗಿ ಬಡವರಿಗೆ ಅನುಕೂಲ ಆಗಲೆಂದು ಈ ಕೇಂದ್ರಗಳನ್ನು ಆರಂಭಿಸಲಾಗುತ್ತಿದೆ'' ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಉದ್ಘಾಟನೆ ಮಾಡಲಿದ್ದಾರೆ" ಎಂದು ಮಾಹಿತಿ ನೀಡಿದರು. "ಕ್ಯಾನ್ಸರ್ ಪತ್ತೆಯಾಗಿದೆ ಅನ್ನುವವರು ಕೀಮೋ ಥೆರಪಿ ಪಡೆಯಬಹುದು. ಎಲ್ಲಾ ರೀತಿಯ ತರಬೇತಿ ಮಾಡಲಾಗಿದೆ. ಮೆಡಿಕಲ್‌ ಅಂಕಾಲಜಿಸ್ಟ್ ಮಾಡಿದ್ದೇವೆ. ನರ್ಸ್‌ಗಳಿಗೆ ತರಬೇತಿ ನೀಡುತ್ತಿದ್ದೇವೆ. ಪ್ರತಿ ಆಸ್ಪತ್ರೆಯಲ್ಲಿ 10 ಬೆಡ್ ಮೀಸಲಿಡಲಾಗಿದೆ. ಇಬ್ಬರು ನರ್ಸ್‌ಗಳು ಇರ್ತಾರೆ. ಉಚಿತ ಚಿಕಿತ್ಸೆಗೆ ತುಂಬಾ ಅನುಕೂಲ ಆಗಲಿದೆ. ಬಿಪಿಎಲ್ ಕುಟುಂಗಳಿಗೆ ಉಚಿತವಾಗಿ ಆಗಲಿದೆ'' ಎಂದು ತಿಳಿಸಿದರು.

ಜಿಲ್ಲೆಗಳಲ್ಲಿ ಕೀಮೋಥೆರಪಿ ಕೇಂದ್ರಗಳು:

ಇನ್-ಹೌಸ್, ವಿಜಯಪುರ ಇನ್-ಹೌಸ್, ಉಡುಪಿ ಹುಬ್ಬಳ್ಳಿ ಸೂಪ‌ರ್ ಸ್ಪೆಷಾಲಿಟಿ ಆಸ್ಪತ್ರೆ, ಬಳ್ಳಾರಿ ಹೆಚ್‌ಸಿಜಿ ಹಾಸ್ಪಿಟಲ್‌, ಧಾರವಾಡ ಹುಬ್ಬಳ್ಳಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಚಿತ್ರದುರ್ಗ ಹುಬ್ಬಳ್ಳಿ ಸೂಪ‌ರ್ ಸ್ಪೆಷಾಲಿಟಿ ಆಸ್ಪತ್ರೆ, ವಿಜಯನಗರ ಹುಬ್ಬಳ್ಳಿ ಸೂಪ‌ರ್ ಸ್ಪೆಷಾಲಿಟಿ ಆಸ್ಪತ್ರೆ, ಹಾವೇರಿ ಸಂಜೀವಿನಿ ಆಸ್ಪತ್ರೆ, ಬೆಂಗಳೂರು ಸಂಜೀವಿನಿ ಆಸ್ಪತ್ರೆ, ಬೆಂಗಳೂರು ನಗರ, ಸಿ.ವಿ.ರಾಮನ್ ಆಸ್ಪತ್ರೆ ಕೆಎಂಸಿ, ಮಂಗಳೂರು, ದಕ್ಷಿಣ ಕನ್ನಡ ಕಿದ್ವಾಯಿ ಆಸ್ಪತ್ರೆ, ಮೈಸೂರು ಸಿದ್ಧಾರ್ಥ ಮೆಡಿಕಲ್‌ ಕಾಲೇಜು, ತುಮಕೂರು ಆ‌ರ್.ಎಲ್‌. ಜಾಲಪ್ಪ ಮೆಡಿಕಲ್ ಕಾಲೇಜು ಆಸ್ಪತ್ರೆ, ಕೋಲಾರ ನಿಜಲಿಂಗಪ್ಪ ಮೆಡಿಕಲ್‌ ಕಾಲೇಜು ಆಸ್ಪತ್ರೆ, ಬಾಗಲಕೋಟೆ ಹುಬ್ಬಳ್ಳಿ ಸೂಪ‌ರ್ ಸ್ಪೆಷಾಲಿಟಿ ಆಸ್ಪತ್ರೆ, ದಾವಣಗೆರೆ

WhatsApp Image 2025-04-11 at 6.14.42 PM.jpeg
WhatsApp Image 2025-03-24 at 6.54.49 AM.jpeg
MCC Bank Website Ad English.jpg
WhatsApp Image 2025-01-13 at 14.53.16 (1).jpeg
WhatsApp Image 2024-10-09 at 8.05.11 PM.jpeg
WhatsApp Image 2024-04-29 at 2.40.38 PM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.