logo
AADYA ELECTRONICS.jpg
SHARADA TECHERS.jpeg
hindalco everlast.jpeg

ಕಾರ್ಕಳ: ಜೂ.23ರಂದು ರಾಜ್ಯ ಸರಕಾರದ ವಿರುದ್ಧ ಧರಣಿ ಸತ್ಯಾಗ್ರಹ

ಟ್ರೆಂಡಿಂಗ್
share whatsappshare facebookshare telegram
22 Jun 2025
post image

ಕಾರ್ಕಳ: ರಾಜ್ಯ ಸರಕಾರದ ಜನವಿರೋಧಿ ನಿಲುವು ಖಂಡಿಸಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 380 ಗ್ರಾಮ ಪಂಚಾಯತನ ಮುಂದೆ ಜೂ. 23ರಂದು ಬೆಳಿಗ್ಗೆ 10ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಧರಣಿ ಸತ್ಯಾಗ್ರಹ ನಡೆಸಲಿದ್ದೇವೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ, ಶಾಸಕ ವಿ ಸುನಿಲ್ ಕುಮಾರ್ ಮಾಹಿತಿ ನೀಡಿದರು.

ವಿಕಾಸ ಕಚೇರಿಯಲ್ಲಿ ಜೂ.16ರಂದು ನಡೆದ ವಿಕಸಿತ ಭಾರತ ಕಾರ್ಯಾಗಾರದಲ್ಲಿ ಮಾತನಾಡಿ, 9/11 ವಿನ್ಯಾಸ ನಕ್ಷೆ ಪ್ರಾಧಿಕಾರದ ಸಮಸ್ಯೆಯ ಬಗ್ಗೆ ಸರಕಾರ ಇಲ್ಲಿವರೆಗೆ ಯಾವುದೇ ಪರಿಹಾರವನ್ನು ಕಂಡುಕೊಂಡಿಲ್ಲ. ಪರಿಣಾಮವಾಗಿ ನಮ್ಮ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಕಟ್ಟಡ ಕಾಮಗಾರಿಗಳು ಸ್ಥಗಿತವಾಗಿದೆ. ರಾಜ್ಯ ಸರಕಾರ ಅಧಿಕಾರ ವಹಿಸಿ 2 ವರ್ಷ ಪೂರ್ಣಗೊಂಡರೂ ಒಂದೇ ಒಂದು ಆಶ್ರಯ ಮನೆ ನೀಡಿಲ್ಲ. ಒಂದೊಂದು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕನಿಷ್ಠ 100 ಆಶ್ರಯ ಮನೆಗಳನ್ನು ನೀಡಬೇಕಾಗಿ ಹಾಗೂ ಅಕ್ರಮ ಸಕ್ರಮ ಅರ್ಜಿಗಳನ್ನು ತಿರಸ್ಕರಿಸದಂತ ಆಗ್ರಹಿಸಿ ಪಂಚಾಯತ್ ಮುಂದೆ ಧರಣಿ ನಡೆಸಲಿದ್ದೇವೆ. ಒಂದೊಂದು ಪಂಚಾಯತ್ ಮುಂದೆ ಕನಿಷ್ಠ ನೂರು ಮಂದಿ ಭಾಗವಹಿಸಬೇಕೆಂದು ಸುನಿಲ್ ಕುಮಾರ್ ಹೇಳಿದರು.

ಫಲಾನುಭವಿಗಳ ವೇತನ ರದ್ದು: ರಾಜ್ಯದಲ್ಲಿ ಒಟ್ಟು 21 ಲಕ್ಷದ 80 ಸಾವಿರ ವೃದ್ದಾಪ್ಯ ವೇತನ 31 ಲಕ್ತ ಸಂಧ್ಯಾ ಸುರಕ್ಷಾ ಫಲಾನುಭವಿಗಳಿದ್ದಾರೆ. ಆದರೆ, ಇತ್ತೀಚೆಗೆ ರಾಜ್ಯ ಸರಕಾರ 9 ಲಕ್ಷ ವೃದ್ಧಾಪ್ಯ ವೇತನ ಹಾಗೂ 14 ಲಕ್ಷ ಸಂಧ್ಯಾ ಸುರಕ್ಷಾ ಯೋಜನೆಯವ ಕ್ಯಾನ್ಸಲ್ ಮಾಡಬೇಕೆಂದು ಆದೇಶ ಹೊರಡಿಸಿರುತ್ತಾರೆ ಎಂದು ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಮೋದಿ ಸರಕಾರ 11 ವರ್ಷಗಳನ್ನು ಪೂರೈಸುತ್ತಿರುವ ಈ ಸಂದರ್ಭದಲ್ಲಿ ಸರಕಾರದ ಸಾಧನೆಗಳನ್ನು ಹಾಗೂ ವಿಕಸಿತ ಭಾರತದ ಕುರಿತು ಜನತೆಗೆ ತಿಳಿಸುವ ನಿಟ್ಟಿನಲ್ಲಿ ದೇಶಾದ್ಯಂತ ಕಾರ್ಯಾಗಾರಗಳು ನಡೆಯುತ್ತಿದೆ ಎಂದರು.

60% ಎನ್ನುವಷ್ಟರ ಮಟ್ಟಿಗೆ ರಾಜ್ಯ ಸರಕಾರದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಸರಕಾರದ ವಿವಿಧ ಸುತ್ತೋಲೆಗಳು ಹಾಗೂ ಗ್ರಾಮ ಪಂಚಾಯತ್‌ ಆಡಳಿತದಿಂದ ಜನರಿಗಾಗುತ್ತಿರುವ ತೊಂದರೆಗಳು ಹಲವು ನಿದರ್ಶನಗಳಿಂದ ಜನರಿಗೆ ಈಗಾಗಲೇ ತಿಳಿದಿದೆ. ಈ ಬಗ್ಗೆ ಧ್ವನಿ ಎತ್ತುವ ಕೆಲಸವಾಗಬೇಕು ಎಂದರು.

ಪ್ರಸ್ತುತ ನಾವು ಮಾಹಿತಿ ತಂತ್ರಜ್ಞಾನದ ಕಾಲಘಟ್ಟದಲ್ಲಿದ್ದೇವೆ. ನಾವಾಡುವ ಮಾತು ಕೆಲವೊಮ್ಮೆ ಗ್ರಾಮ ಪಂಚಾಯತ್ ನಿಂದ ಲೋಕಸಭೆಯವರೆಗೆ ಪರಿಣಾಮ ಬೀರುತ್ತದೆ ಮೋದಿ ಸರಕಾರದ 11 ವರ್ಷಗಳ ಕಾರ್ಯವೈಖರಿಯನ್ನು ತಿಳಿಸುವ ಕೆಲಸ ನಮ್ಮಿಂದಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದರು.

WhatsApp Image 2025-04-11 at 6.14.42 PM.jpeg
WhatsApp Image 2025-03-24 at 6.54.49 AM.jpeg
MCC Bank Website Ad English.jpg
WhatsApp Image 2025-01-13 at 14.53.16 (1).jpeg
WhatsApp Image 2024-10-09 at 8.05.11 PM.jpeg
WhatsApp Image 2024-04-29 at 2.40.38 PM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.