ಕಾರ್ಕಳ: ಡಾ. ಟಿ. ಎಂ. ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳ ಇವರ ನೇತೃತ್ವದಲ್ಲಿ ವಿನಾಯಕ ಫ್ರೆಂಡ್ಸ್ ಕಾರ್ಕಳ ಇವರ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಜೂ.9 ರಂದು ನಡೆಯಿತು.
ಈ ಸಂದರ್ಭದಲ್ಲಿ ವಿನಾಯಕ ಫ್ರೆಂಡ್ಸ್ ಕಾರ್ಕಳ ಇದರ ಮುಖ್ಯಸ್ಥರಾದಂತಹ ಪ್ರಮೋದ್ ಪಾಟಕ್, ಶ್ರೀನಿವಾಸ್, ಸಾಕ್ಷತ್ ಹಾಗೂ ಇನ್ನಿತರೂ ಉಪಸ್ಥಿತರಿದ್ದರು. ರಕ್ತದಾನ ಮಾಡಿದವರಿಗೆ ಗಿಡ ಕೊಟ್ಟು ಸ್ವಾಗತಿಸಿದರು. ಈ ಸಂದರ್ಭದಲ್ಲಿ ತುಳುನಾಡ ತುಡಾರ್ ಖ್ಯಾತಿಯ ಹಾಗೂ ನಮ್ಮ ತುಳುನಾಡು ಟ್ರಸ್ಟ್ (ರಿ) ನ ರಾಜ್ಯ ಸಂಚಾಲಕರಾದಂತಹ ಕೀರ್ತಿ ಕಾರ್ಕಳ ಇವರು ರಕ್ತದಾನ ಮಾಡಿ ಎಲ್ಲರಿಗೂ ರಕ್ತದಾನ ಮಾಡುವಂತೆ ಪ್ರೇರೇಪಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.