

ಮಂಗಳೂರು: ಹ್ಯೂಮನ್ ಪ್ಯಾಪಿಲೋಮಾ ವೈರಸ್ (HPV) ಲಸಿಕೆಯನ್ನು ಕಡ್ಡಾಯಗೊಳಿಸಲು ಸಾಧ್ಯವಿಲ್ಲ. ಹೆಣ್ಣುಮಕ್ಕಳಿಗೆ ಲಸಿಕೆ ಹಾಕಿಸಬೇಕೇ ಅಥವಾ ಬೇಡವೇ ಎಂಬ ಅಂತಿಮ ನಿರ್ಧಾರ ಪೋಷಕರಿಗೆ ಬಿಟ್ಟದ್ದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ.
ಮಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ HPV ಲಸಿಕಾ ಅಭಿಯಾನ ಉತ್ತಮವಾಗಿ ಸಾಗುತ್ತಿದ್ದು, ಕರಾವಳಿ ಭಾಗ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಮಾತ್ರ ಲಸಿಕೆ ಸ್ವೀಕಾರ ಪ್ರಮಾಣ ಕಡಿಮೆಯಾಗಿದೆ ಎಂದು ಹೇಳಿದರು.
ಈ ಬಗ್ಗೆ ಜನರಲ್ಲಿ ಇರುವ ತಪ್ಪು ಕಲ್ಪನೆಗಳನ್ನು ನಿವಾರಿಸಿ, ಲಸಿಕೆಯ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸಲು ಆರೋಗ್ಯ ಇಲಾಖೆ ವ್ಯಾಪಕ ಜಾಗೃತಿ ಅಭಿಯಾನ ನಡೆಸುತ್ತಿದೆ. ನಾವು ಜನರಲ್ಲಿ ಜಾಗೃತಿ ಮೂಡಿಸಬಹುದು, ಲಸಿಕೆಯ ಮಹತ್ವವನ್ನು ತಿಳಿಸಬಹುದು. ಆದರೆ, ಅದನ್ನು ಕಡ್ಡಾಯಗೊಳಿಸಲು ಸಾಧ್ಯವಿಲ್ಲ. ತಮ್ಮ ಹೆಣ್ಣುಮಕ್ಕಳಿಗೆ ಲಸಿಕೆ ಹಾಕಿಸಬೇಕೇ ಅಥವಾ ಬೇಡವೇ ಎಂಬುದು ಪೋಷಕರ ವೈಯಕ್ತಿಕ ನಿರ್ಧಾರ" ಎಂದು ತಿಳಿಸಿದರು.
ಇದೇ ವೇಳೆ ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಮೊದಲ ಏಳು ದಿನಗಳವರೆಗೆ ರೂ. 2.5 ಲಕ್ಷದವರೆಗೆ ಉಚಿತ ಚಿಕಿತ್ಸೆಯನ್ನು ನೀಡುವ ಯೋಜನೆಯನ್ನು ರಾಜ್ಯ ಸರ್ಕಾರ ಪ್ರಸ್ತಾಪಿಸಿದೆ ಎಂದು ತಿಳಿಸಿದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.