

ಕಾರ್ಕಳ: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಸಂಘಟನೆ ಕುರಿತು ಕಾಂಗ್ರೆಸ್ ನಾಯಕರು ಟೀಕೆ ಮಾಡುತ್ತಿರುವ ಬೆನ್ನಲ್ಲೇ, ವಿಧಾನ ಪರಿಷತ್ತಿನಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೀಡಿರುವ ಉತ್ತರವನ್ನು ಉಲ್ಲೇಖಿಸಿ ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
RSS ಶಾಖೆ ಹಾಗೂ ಪಥಸಂಚಲನ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿಧಾನ ಪರಿಷತ್ತಿನಲ್ಲಿ ಉತ್ತರಿಸಿದ್ದಾರೆ. 2025ರಲ್ಲಿ ಅಂದಿನ ಗೃಹ ಸಚಿವ ಡಾ. ಜಿ. ಪರಮೇಶ್ವರ ಕೂಡ ಇದೇ ರೀತಿಯ ಉತ್ತರ ನೀಡಿದ್ದರು. ಹೀಗಾಗಿ ಇಬ್ಬರು ಗೃಹ ಸಚಿವರ ಉತ್ತರಗಳು ಒಂದೇ ಆಗಿವೆ ಎಂದು ಸುನಿಲ್ ಕುಮಾರ್ ಹೇಳಿದ್ದಾರೆ.
ದಿನಬೆಳಗಾದರೆ RSS ಸಂಘಟನೆ ವಿರುದ್ಧ ದ್ವೇಷದ ಮಾತುಗಳನ್ನು ಆಡುವ ಪ್ರಿಯಾಂಕ್ ಖರ್ಗೆ, ಸದನದಲ್ಲಿ ಸಂಘದ ಕುರಿತು ನೀಡಿರುವ ಉತ್ತರವನ್ನು ಗಮನಿಸಬೇಕು. RSS ಶಾಖೆ ಮತ್ತು ಪಥಸಂಚಲನಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂಬುದನ್ನು ಅವರದೇ ಉತ್ತರ ಸ್ಪಷ್ಟಪಡಿಸಿದೆ ಎಂದು ಅವರು ತಿಳಿಸಿದ್ದಾರೆ.
“ಗೋಬೆಲ್ಸ್ ಕಾಂಗ್ರೆಸ್” ನಾಯಕರು ನೂರು ಸುಳ್ಳುಗಳನ್ನು ಹೇಳಿದರೂ RSSನ ಸಂಸ್ಕಾರಕ್ಕೆ ಧಕ್ಕೆ ತರಲು ಸಾಧ್ಯವಿಲ್ಲ. ಸಂಘದ ಕುರಿತು ದ್ವೇಷದ ಪ್ರಚಾರ ಮಾಡುವ ಬದಲು, ಸದನದಲ್ಲಿ ನೀಡಿರುವ ಅಧಿಕೃತ ಉತ್ತರವನ್ನು ಕಾಂಗ್ರೆಸ್ ನಾಯಕರು ಗಮನಿಸಬೇಕು ಎಂದು ಸುನಿಲ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.